ಪೊಲೀಸ್ ವಾಹನಕ್ಕೆ ಬೆಂಕಿ ಕೊಟ್ಟಿಲ್ಲ ಎಂದ ಬಿಜೆಪಿ: ವೀಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ ಕಾಂಗ್ರೆಸ್

Prasthutha|

ಕೊಲ್ಕತ್ತಾ: ಮಂಗಳವಾರ ಕೊಲ್ಕತ್ತಾದಲ್ಲಿ ಬಿಜೆಪಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ಪೊಲೀಸ್ ವಾಹನಕ್ಕೆ ತನ್ನ ಕಾರ್ಯಕರ್ತರು ಬೆಂಕಿ ಹಚ್ಚಿಲ್ಲ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ. ಆದರೆ ಈ ಕುರಿತು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವೀಡಿಯೋವನ್ನು ಟ್ವೀಟ್  ಮಾಡಿದ್ದು, ಇದರಲ್ಲಿ ಕೇಸರಿ ಬಟ್ಟೆ ಧರಿಸಿದ ಒಬ್ಬ ವ್ಯಕ್ತಿ ಪೊಲೀಸ್ ವಾಹನದ ಸೀಟ್ ಗೆ ಬೆಂಕಿ ಹಚ್ಚಿದ್ದಾನೆ.

- Advertisement -

ಪಶ್ಚಿಮ ಬಂಗಾಳದಲ್ಲಿ ಯಾವ ಪಕ್ಷದ ‘ರಾಷ್ಟ್ರೀಯ ದಂಗೆಕೋರರು’ ಪೊಲೀಸ್ ಜೀಪುಗಳನ್ನು ಸುಡುತ್ತಿದ್ದಾರೆ ಎಂದು ನಿಮಗೆ ತಿಳಿದಿದೆಯೇ? ಎಂದು ಬಿ.ವಿ. ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ.

Join Whatsapp