ಬಹುಮತ ಸಾಬೀತುಪಡಿಸಿದ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ

Prasthutha|

ಮುಂಬೈ: ನಿರೀಕ್ಷೆಯಂತೆ ಏಕನಾಥ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದೆ.

- Advertisement -

ವಿಧಾನಸಭೆ ಅಧಿವೇಶನ ಆರಂಭಗೊಂಡ ಬಳಿಕ ಬಹುಮತ ಸಾಬೀತುಪಡಿಸುವ ಕಲಾಪವನ್ನು ಸ್ಪೀಕರ್ ಕೈಗೆತ್ತಿಕೊಂಡರು. ಶಾಸಕರ ತಲೆ ಎಣಿಕೆ ನಡೆಸಿದಾಗ  ಸರ್ಕಾರದ ಪರವಾಗಿ 164 ಮತಗಳು ಲಭಿಸಿವೆ ಎಂದು ಘೋಷಿಸಲಾಯಿತು. ಇದರೊಂದಿಗೆ ಸರ್ಕಾರ ಬಹುಮತ ಸಾಬೀತುಪಡಿಸಿದೆ ಎಂದು ಸ್ಪೀಕರ್ ಪ್ರಕಟಿಸಿದರು.

ಈ ಮಧ್ಯೆ ಉದ್ಧವ್ ಠಾಕ್ರೆ ಬಣದಲ್ಲಿ ಗುರುತಿಸಿಕೊಂಡಿದ್ದ ಶಾಸಕ ಸಂತೋಷ್ ಬಂಗೆರ್ ಅವರು ಸೋಮವಾರ ಮುಖ್ಯಮಂತ್ರಿ ಶಿಂಧೆ ಬಣದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು.

Join Whatsapp