ಬಿಜೆಪಿ ಸಂವಿಧಾನ ಬದಲಾಯಿಸುವ ಬಯಕೆ ಹೊಂದಿದೆ: ಜೈರಾಮ್‌ ರಮೇಶ್‌

Prasthutha|

ನವದೆಹಲಿ: ಬಿಜೆಪಿಯ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆಯು ಸಂವಿಧಾನವನ್ನು ಬದಲಾಯಿಸುವ ಬಯಕೆಯನ್ನು ಸೂಚಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಪ್ರಶ್ನಿಸಿದ್ದಾರೆ.

- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ಮೋದಿ ಅವರ ರ‍್ಯಾಲಿಗಿಂತ ಮೊದಲು ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, ವಾರ್ಧಾ ಒಂದು ಕಾಲದಲ್ಲಿ ಮಹಾತ್ಮಾ ಗಾಂಧಿ ವಾಸಿಸುತ್ತಿದ್ದ ನಗರವಾಗಿದೆ. ಇಂದು ಮಹಾತ್ಮರ ಆದರ್ಶಗಳ ಮೇಲೆ ಪ್ರಧಾನಿಯವರ ಪಕ್ಷದ ನಾಯಕರಿಂದ ದಾಳಿ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಗಾಂಧಿಯವರ ಪರಂಪರೆ ಮತ್ತು ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ನಿಜವಾಗಿಯೂ ಗೌರವಿಸುತ್ತಾರೆಯೇ ಎಂದು ರಮೇಶ್ ಪ್ರಶ್ನಿಸಿದರು.

Join Whatsapp