ಬಿ.ಎಲ್. ಸಂತೋಷ್ ಇರುವವರೆಗೂ ರಾಜ್ಯದಲ್ಲಿ BJP ಗೆಲ್ಲುವುದಿಲ್ಲ: ರೇಣುಕಾಚಾರ್ಯ

Prasthutha|

ದಾವಣಗೆರೆ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎಂದು ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

- Advertisement -


ಎಂ.ಪಿ ರೇಣುಕಾಚಾರ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.


ಬಿಎಲ್ ಸಂತೋಷ್ ರಾಜ್ಯವನ್ನು ಬಿಟ್ಟು ತೊಲಗಬೇಕಿದೆ. ಆತ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಆತ ಹೋದರೆ ಮಾತ್ರ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ. ಬಳಿಕ ಬಿಎಲ್ ಸಂತೋಷ್ ವಿರುದ್ದ ಧಿಕ್ಕಾರ ಕೂಗಿದ್ದಾರೆ.



Join Whatsapp