ರಾಜಕೀಯ ಕಿರುಕುಳ ಆರೋಪ: ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ!

Prasthutha|

ದೊಡ್ಡಬಳ್ಳಾಪುರ: ಬಿಜೆಪಿ ಕಾರ್ಯಕರ್ತನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಸಾವಿಗೆ ರಾಜಕೀಯ ಕಿರುಕುಳವೇ ಕಾರಣ ಎನ್ನಲಾಗಿದೆ.

- Advertisement -


ದೊಡ್ಡಬಳ್ಳಾಪುರ ನಗರದ ಕಚೇರಿಪಾಳ್ಯದ ವಿನೋದ್(30) ಮೃತಪಟ್ಟ ಬಿಜೆಪಿ ಕಾರ್ಯಕರ್ತ.


ಸ್ನೇಹಿತನ ಬೈಕ್ ನಲ್ಲಿ ತಳಗವಾರ ಗ್ರಾಮಕ್ಕೆ ಡ್ರಾಪ್ ತೆಗೆದುಕೊಂಡಿದ್ದ ವಿನೋದ್, ಸಂಜೆಯಾದರೂ ಮನೆಗೆ ಮರಳಿರಲಿಲ್ಲ. ಇದೇ ವೇಳೆ ಕೆರೆ ದಡದಲ್ಲಿ ಡೆತ್ ನೋಟ್ ಹಾಗೂ ಚಪ್ಪಲಿ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ಕಾರ್ಯಾಚರಣೆ ನಡೆಸಿದಾಗ ಶವ ಪತ್ತೆಯಾಗಿದೆ.
ನಗರಸಭೆ ಸದಸ್ಯೆಯ ಪತಿ ಮಂಜುನಾಥ್ ಹಾಗೂ ಇನ್ನೂ ಮೂವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ವಿನೋದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Join Whatsapp