ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆ ಸಾವು: ಓರ್ವ ಮುಖಂಡ ಅಸ್ವಸ್ಥ

Prasthutha|

ರಾಮನಗರ:ವಾಲ್ಮೀಕಿ ಮತ್ತು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ- ಜೆಡಿಎಸ್ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ ನಡೆಸುತ್ತಿದ್ದಾರೆ.

- Advertisement -

ಇಂದು (ಆಗಸ್ಟ್ 05) ಮೂರನೇ ದಿನ ಪಾದಯಾತ್ರೆ ರಾಮನಗರ ಜಿಲ್ಲೆ ಪ್ರವೇಶಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚನ್ನಪಟ್ಟಣದಲ್ಲಿ ಪಾದಯಾತ್ರೆಯಲ್ಲಿ ನಡೆಯುತ್ತಿರುವ ವೇಳೆ ಬೆಂಗಳೂರಿನ ಬಸವನಗುಡಿಯ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಚನ್ನಪಟ್ಟಣದಲ್ಲಿ ಮಾದಯಾತ್ರೆ ನಡೆಯುತ್ತಿರುವ ವೇಳೆ ಗೌರಮ್ಮ ಕುಸಿದುಬಿದ್ದಿದ್ದಾರೆ.

ಕೂಡಲೇ ಅವರನ್ನ ಚನ್ನಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಅಷ್ಟರಾಗಲೇ ಗೌರಮ್ಮ ಕೊನೆಯುಸಿರೆಳೆದಿದ್ದಾರೆ. ಇನ್ನು ಚನ್ನಪಟ್ಟಣದಲ್ಲಿ ಪಾದಯಾತ್ರೆ ವೇಳೆ ಬಿಜೆಪಿ ಮುಖಂಡರೊಬ್ಬರು ಅಸ್ವಸ್ಥಗೊಂಡಿದ್ದಾರೆ. ಬೆಂಗಳೂರಿನ ಜಯನಗರದ ಮಂಡಳ ಉಪಾಧ್ಯಕ್ಷ ಶಂಕರ್ ಅವರು ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ರಾಮನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.



Join Whatsapp