ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ

Prasthutha|

ತುಮಕೂರು: ಇಲ್ಲಿನ ಪಾವಗಡ ತಾಲೂಕಿನ ತಿರುಮಣಿ ಬಿ.ಕೆ.ಹಳ್ಳಿ ಬಳಿ ಡಿ.7ರಂದು ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರಸನ್ನಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿ ಅಪ್ಪಾಜಿಹಳ್ಳಿ ಗ್ರಾಮದ ರವಿಕುಮಾರ್(35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರಸನ್ನ ಕುಮಾರ್ ರನ್ನು ಕೊಲೆ ಮಾಡಲಾಗಿತ್ತು.

- Advertisement -

ಬಿಜೆಪಿ ಕಾರ್ಯಕರ್ತ ಪ್ರಸನ್ನ ಕುಮಾರ್ ಅಣ್ಣನ ಮಗಳನ್ನು ಆರೋಪಿ ರವಿಕುಮಾರ್ ವರ್ಷದ ಹಿಂದೆ ಮದುವೆಯಾಗಿದ್ದ . ಆದರೆ ಪತ್ನಿಯನ್ನು ಸರಿಯಾಗಿ ನೋಡಿಕೊಳ್ಳದ ರವಿಕುಮಾರ್ ಆಕೆಯನ್ನು ತವರು ಮನೆಗೆ ಕಳುಹಿಸಿಕೊಟ್ಟಿದ್ದ ಎನ್ನಲಾಗಿದೆ. ಅಲ್ಲದೇ ಕೋರ್ಟ್ ನಲ್ಲಿ ವಿಚ್ಛೇದನ ಪ್ರಕ್ರಿಯೆ ನಡೆಯುತ್ತಿತ್ತು. ಹೀಗಾಗಿ ಕೌಟುಂಬಿಕ ಕಲಹ ಹಿನ್ನೆಲೆ ಪ್ರಸನ್ನನನ್ನು ರವಿಕುಮಾರ್ ಕೊಲೆ ಮಾಡಿದ್ದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ. ಸದ್ಯ ತಿರುಮಣಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Join Whatsapp