ಪದ್ಮರಾಜ್ ಪೂಜಾರಿಗೆ ಮನಸೋತ ಬಿಜೆಪಿ ಕಾರ್ಯಕರ್ತರು

Prasthutha|

ಬಿಜೆಪಿ ಕಾರ್ಯಕರ್ತರ ಬಳಿಗೆ ಹೋಗಿ ಮತಯಾಚನೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ

- Advertisement -

ಮರ್ಕಂಜೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಮರ್ಕಂಜೆಯಲ್ಲಿ ಪದ್ಮರಾಜ್ ಪೂಜಾರಿ ಅವರು ಬಿಜೆಪಿ ಕಾರ್ಯಕರ್ತರ ಬಳಿಗೆ ಹೋಗಿ ಬೆಂಬಲ ಯಾಚಿಸಿದರು.

- Advertisement -

ಇನ್ನು ಈ ಬಗ್ಗೆ ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿರುವ ಅವರು, ಮರ್ಕಂಜೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಸಿಕ್ಕ ಬಿಜೆಪಿಯ ಬೆಂಬಲಿಗರನ್ನೂ ಸಹ ಮಾತನಾಡಿ, ದ್ವೇಷದ ರಾಜಕಾರಣಕ್ಕೆ ತೆರೆ ಎಳೆದು, ಸಾಮರಸ್ಯದಿಂದ ಬದುಕೋಣ ಎಂಬ ಸಂದೇಶ ನೀಡಿ ಅವರಲ್ಲಿಯೂ ಬೆಂಬಲ ಯಾಚಿಸಿದೆ ಎಂದು ಬರೆದುಕೊಂಡಿದ್ದಾರೆ.

Join Whatsapp