ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಬಿಜೆಪಿಗೆ ಗುಡ್​​ಬೈ

Prasthutha|

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಬಿಜೆಪಿಗೆ ಗುಡ್​​ಬೈ ಹೇಳಿದ್ದು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ.

- Advertisement -

ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರು ಗುರುಮಿಠಕಲ್ ಕ್ಷೇತ್ರದ ವಿಧಾನಸಭೆ ಟಿಕೆಟ್ ಕೇಳಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿರುವ ಕಾರಣ ಟಿಕೆಟ್ ನೀಡಲಾಗದು ಎಂದು ಬಿಜೆಪಿ ನಾಯಕರು ತಿಳಿಸಿದ್ದರು. ಹೀಗಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ.

2019ರ ಲೋಕಸಭೆ ಚುನಾವಣೆ ವೇಳೆ ಬಾಬುರಾವ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ ಆಗಿದ್ದರು. ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎನ್ನಲಾಗಿದೆ.

- Advertisement -

ಗುರುಮಠಕಲ್‌ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಚಿಂಚನಸೂರ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಸೋತಿದ್ದ ಅವರು ಇದೀಗ ಮತ್ತೆ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.

Join Whatsapp