ಬಿಜೆಪಿಗರು ಎಡವಟ್ಟು ಗಿರಾಕಿಗಳು: ಎಚ್ ವಿಶ್ವನಾಥ್

Prasthutha|

ಹುಬ್ಬಳ್ಳಿ: ಏನಾದರೂ ಬದಲಾವಣೆಯಾಗಬಹುದು ಎಂದು ಭಾವಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದೆ. ಆದರೆ ಬಿಜೆಪಿಯವರಂಥ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ ಎಂದು ಮಾಜಿ ಸಚಿವ ಎಚ್ ವಿಶ್ವನಾಥ್ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಶಾಲೆಗೆ ಕೇಸರಿ ಬಣ್ಣ ಬಳಿಯುತ್ತಿದ್ದಾರೆ. ಶಾಲಾ, ಕಾಲೇಜುಗಳಲ್ಲಿ ಸರಿಯಾಗಿ ಪರೀಕ್ಷೆ ನಡಸುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.
ರಾಜಕಾರಣಿಗಳು ಕನ್ನಡ ಭಾಷೆಯನ್ನು ಕೊಲ್ಲುತ್ತಿದ್ದಾರೆ. ಎಲ್ಲ ಹುದ್ದೆಗಳ ಭರ್ತಿಗೆ ದುಡ್ಡು ಕೇಳುತ್ತಿದ್ದಾರೆ. ಇದನ್ನು ಸರ್ಕಾರ ಎನ್ನಲಾಗುತ್ತದೆಯೇ ಎಂದು ಆಕ್ಷೇಪ ವ್ಯಕ್ತಪಡಿಸಿದರು.


ನಾನು 50 ವರ್ಷಗಳಿಂದ ರಾಜಕಾರಣ ನೋಡುತ್ತಿದ್ದೇನೆ. ಆದರೆ ಇತ್ತೀಚಿನ ದಿನಗಳಲ್ಲಿ ಚುನಾವಣೆ ಎಂದರೆ ಎಷ್ಟು ಹಣ ಇಟ್ಟಿದ್ದೀಯಾ ಎಂದು ಕೇಳುತ್ತಾರೆ. ಇಂದು ಪಕ್ಷಕ್ಕಿಂತ ಪಕ್ಷದ ನಾಯಕರು ದೊಡ್ಡವರಾಗಿದ್ದಾರೆ. ಮೊದಲು ಪಕ್ಷ ದೊಡ್ಡದಿತ್ತು, ಆದರೆ ಇದೀಗ ನಾಯಕಾರಣ ರಾಜಕಾರಣ ಆಗಿದೆ. ಇದು ಮಾರಕ ಎಂದು ಹೇಳಿದರು.

Join Whatsapp