Home ಟಾಪ್ ಸುದ್ದಿಗಳು ಬಿಜೆಪಿಯ ಜೆಸಿ ಮಾಧುಸ್ವಾಮಿಗೆ ಸೋಲು

ಬಿಜೆಪಿಯ ಜೆಸಿ ಮಾಧುಸ್ವಾಮಿಗೆ ಸೋಲು

ಬಿಜೆಪಿಯ ಅಭ್ಯರ್ಥಿ ಹಾಲಿ ಸಚಿವ ಜೆಸಿ ಮಾಧುಸ್ವಾಮಿ ಜೆಡಿಎಸ್‌ ಅಭ್ಯರ್ಥಿ ಸುರೇಶ್ ಬಾಬು ವಿರುದ್ಧ ಸೋಲನುಭವಿಸಿದ್ದಾರೆ.  ಮಾಧು ಸ್ವಾಮಿ ಸೋಲಿಗೆ ಬಂಜಾರ ಸಮುದಾಯದ ಕಿಚ್ಚು ಕಾರಣ ಎನ್ನಲಾಗುತ್ತಿದೆ. ಒಳ ಮೀಸಲಾತಿ ನೀಡಿದ್ದ ಬಿಜೆಪಿ ಸರ್ಕಾರ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಸಮುದಾಯ ಕ್ಷೇತ್ರದಲ್ಲಿ ಭಾರಿ ಪ್ರತಿಭಟನೆ ನಡೆಸಿತ್ತು.

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಜೆ. ಮಾಧುಸ್ವಾಮಿ ಜೆಡಿಎಸ್‌ನ ಸುರೇಶ್ ಬಾಬು ವಿರುದ್ಧ 10,277 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಮಾಧುಸ್ವಾಮಿ 69,612 ಮತಗಳನ್ನು ಪಡೆದಿದ್ದರೆ, ಸುರೇಶ್ ಬಾಬು 59,335 ಮತಗಳನ್ನು ಪಡೆದುಕೊಂಡಿದ್ದರು.

Join Whatsapp
Exit mobile version