ರಾಮನ ವಿಚಾರದಲ್ಲಿ ಭಗವಾನಿಗೊಂದು ನ್ಯಾಯ ಭೈರಪ್ಪರಿಗೊಂದು ನ್ಯಾಯ : ಹರಿಪ್ರಸಾದ್ ಕಿಡಿ

Prasthutha|

ರಾಮ,ಕೃಷ್ಣರ ಬಗ್ಗೆ ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುವ ನೀವು ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ,. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

“ಸಾಹಿತಿ ಎಸ್.ಎಲ್ ಭೈರಪ್ಪ ರಾಮ ದೇವರಲ್ಲ, ಕೇವಲ ರಾಜ ಎಂದು ಹೇಳಿದ್ದಾರೆ. ಅವರು ರಾಮ,ಕೃಷ್ಣರ ಬಗ್ಗೆ ಮಾತನಾಡುತ್ತಾರೆ. ದ್ರೌಪದಿ ಬಗ್ಗೆ ಬರೆಯುತ್ತಾರೆ. ಅವರು ನಿಮ್ಮವರು ಎಂದು ನೀವು ಸುಮ್ಮನಿರುತ್ತೀರಿ. ಅದೇ ಭಗವಾನ್ ಹೇಳಿದರೆ ಮಸಿ ಬಳಿಯುತ್ತೀರಿ. ಇಂತಹ ದ್ವಂದ್ವ ನೀತಿ ಏಕೆ? ಸಂಘ ಪರಿವಾರದವರು ಮಾತನಾಡಿದರೆ ಸುಮ್ಮನಿದ್ದು ಬೇರೆಯವರು ಮಾತನಾಡಿದರೆ ಮಾತ್ರ ಆಕ್ಷೇಪ ನಡೆಸುವ ನಿಮ್ಮ ನಡೆ ಎಷ್ಟು ಸರಿ” ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -

ನಿಮ್ಮ ಸಾಹಿತಿಗೆ ನೀವೇ ಪ್ರಶಸ್ತಿ ಕೊಡಿಸಿ ನಾಟಕಕ್ಕೂ ಹಣ ಕೊಟ್ಟಿದ್ದೀರಿ ಎಂದು ಹರಿಪ್ರಸಾದ್ ಹೇಳಿದ್ದಾರೆ . ಈ ವೇಳೆ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಮಾತನಾಡಿ, ವಿಶ್ವಮಾನವ ಸಂದೇಶ ಸಾರಿದ ಕುವೆಂಪು ರಚಿತ ಮಲೆಗಳಲ್ಲಿ ಮದುಮಗಳು ನಾಟಕಕ್ಕೆ ಯಾವ ಸರ್ಕಾರವೂ ನೆರವಿಗೆ ಬರಲಿಲ್ಲ. ಈಗ‌ ಪರ್ವಕ್ಕೆ ಸಹಕಾರ ಏಕೆ? ಈ ತಾರತಮ್ಯ ಸರಿಯಲ್ಲ, ಎಷ್ಟೆಲ್ಲಾ ಬರಹಗಾರರು, ಕಾದಂಬರಿಕಾರರಿದ್ದಾರೆ. ಆದರೆ ಅದೆಲ್ಲಾ ಬಿಟ್ಟು ಭೈರಪ್ಪ ಅವರ ನಾಟಕಕ್ಕೆ ಮಾತ್ರ ಅನುದಾನ ಕೊಟ್ಟಿರುವುದು ನಾಗರಿಕ‌ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಬಿಜೆಪಿಗರು ಸಾಹಿತಿಗಳಲ್ಲೂ ಏಕೆ ತಾರತಮ್ಯ ಮಾಡುತ್ತೀರಿ. ಬೈರಪ್ಪ ಕಾದಂಬರಿಯನ್ನು ನಾಟಕ ಮಾಡಲು 1 ಕೋಟಿ ಕೊಟ್ಟಿದ್ದೀರಿ. ಇಂತಹ ತಾರತಮ್ಯ ನಿಲ್ಲಬೇಕು ಎಂದು ಅವರು ಹೇಳಿದ್ದಾರೆ.

- Advertisement -