ಬಿಕೆ ಹರಿಪ್ರಸಾದ್ ಅವರನ್ನು ಸಿಎಂ ಅಥವಾ ಡಿಸಿಎಂ ಮಾಡಬೇಕು: ಪ್ರಣವಾನಂದಶ್ರೀ

Prasthutha|

ಯಾದಗಿರಿ: ಸಿಎಂ ಸ್ಥಾನ ಬದಲಾವಣೆ ಮಾಡುವುದಾದರೆ ಬಿಕೆ ಹರಿಪ್ರಸಾದ್ ಅವರನ್ನೇ ಸಿಎಂ ಅಥವಾ ಡಿಸಿಎಂ ಎಂದು ಘೋಷಿಸುವಂತೆ ಈಡಿಗ ಸಮುದಾಯದ ಪ್ರಣವಾನಂದಶ್ರೀ ಒತ್ತಾಯಿಸಿದ್ದಾರೆ.

- Advertisement -

ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಕೆ ಹರಿಪ್ರಸಾದ್ ಅವರ ಹಿಂದೆ ಇಡೀ ಹಿಂದುಳಿದ ಸಮಾಜವಿದೆ. ರಾಜ್ಯದಲ್ಲಿ ಈಡಿಗ ಸಮುದಾಯ ತನ್ನದೇ ರಾಜಕೀಯ ಪ್ರಾಬಲ್ಯ ಹೊಂದಿದೆ ಎಂದಿದ್ದಾರೆ.

ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತಿದ್ದೇನೆ ಸಿಎಂ ಡಿಸಿಎಂ ಸ್ಥಾನ ಬದಲಾದರೆ ಬಿಕೆ ಹರಿಪ್ರಸಾದ್ ಅವರಿಗೆ ಸಿಎಂ ಅಥವಾ ಡಿಸಿಎಂ ಸ್ಥಾನ ನೀಡಬೇಕು. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದ್ರೂ ಹರಿಪ್ರಸಾದ್ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದರು.

- Advertisement -

ಹರಿಪ್ರಸಾದ್ ಅವರು ಕಾಂಗ್ರೆಸ್‌ ಪಕ್ಷದ ನಿಷ್ಠಾವಂತರು. ಮೂಲತಃ ಕಾಂಗ್ರೆಸ್‌ನವರು ಯಾವುದೇ ಪಕ್ಷದಿಂದ ವಲಸೆ ಬಂದ ನಾಯಕರಲ್ಲ. ಇಂತಹ ನಿಷ್ಠಾವಂತರಿಗೆ ಸ್ಥಾನಮಾನ ನೀಡಬೇಕು ಎಂದರು.

Join Whatsapp