ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟ| ಬಿಕೆ ಹರಿಪ್ರಸಾದ್ ರಾಜೀನಾಮೆ?

Prasthutha|

ಬೆಂಗಳೂರು:  ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ ಸಿದ್ದರಾಮಯ್ಯ ಸರ್ಕಾರದ ಸಂಪುಟದಲ್ಲಿ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ.

- Advertisement -

 ಇದರ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಶಾಸಕರು ಹೈಕಮಾಂಡ್ ನಡೆಗೆ ತೀವ್ರ ಅಸಮಾಧಾನಗೊಂಡಿದ್ದಾರೆ.

ಅದರಲ್ಲೂ ಮುಖ್ಯವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಮುನಿಸಿಕೊಂಡಿದ್ದು, ಸಚಿವ ಸ್ಥಾನ ಕೈ ತಪ್ಪಿದಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Join Whatsapp