ರೈತರ ಹೋರಾಟ ಬೆಂಬಲಿಸಿ SDPI ಯಿಂದ ಕರಾಳ ದಿನಾಚರಣೆ

Prasthutha|

ಮಂಗಳೂರು : ಕೇಂದ್ರ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಮಾರಕ ಕೃಷಿ ಕಾನೂನನ್ನು ಹಿಂಪಡೆಯಲು ಹಾಗೂ ಕೃಷಿಗೆ ಕನಿಷ್ಟ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ದೆಹಲಿಯ ಗಡಿ ಪ್ರದೇಶದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಂದು ಆರು ತಿಂಗಳು ಪೂರ್ತಿಯಾದ ಹಿನ್ನಲೆಯಲ್ಲಿ ದೇಶದ ರೈತ ಸಂಘಟನೆಗಳ ಒಕ್ಕೂಟವು ಮೇ 26 ರಂದು ದೇಶಾದ್ಯಂತ ಕರಾಳ ದಿನವನ್ನಾಗಿ ಆಚರಿಸಲು ಕರೆ ಕೊಟ್ಟಿದೆ. ಈ ಆಂದೋಲನಕ್ಕೆ SDPI ರಾಷ್ಟ್ರೀಯ ಸಮಿತಿಯು ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ. ಆ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಕ್ಷದ ವತಿಯಿಂದ ಪ್ರತಿಭಟನೆಯು ಯಶಸ್ವಿಯಾಗಿ ನಡೆಯಿತು.

- Advertisement -

ಬೆಳಿಗ್ಗೆ ಜಿಲ್ಲೆಯ ಎಲ್ಲಾ ತಾಲೂಕು ವ್ಯಾಪ್ತಿಯ ನಗರ , ಗ್ರಾಮಾಂತರ ಪ್ರದೇಶದ 100 ಕ್ಕೂ ಹೆಚ್ಚಿನ ಕಡೆಗಳಲ್ಲಿ SDPI ಪಕ್ಷದ ಕಾರ್ಯಕರ್ತರು, ನಾಯಕರು ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಕಪ್ಪು ಬಾವುಟ ಹಾಗೂ ಪ್ಳೇಕಾರ್ಡ್ ಪ್ರದರ್ಶಿಸಿ ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಹಾಗೂ ರೈತರಿಗೆ ನೈತಿಕ ಬೆಂಬಲ ನೀಡುವ ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆ ನಡೆಸಿದರು . ಪಕ್ಷದ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ನಾಯಕರು ಕಾರ್ಯಕರ್ತರು ತಮ್ಮ ತಮ್ಮ ಮನೆ ಮತ್ತು ವಾಹನಗಳಿಗೆ ಕಪ್ಪು ಬಾವುಟ ಕಟ್ಟುವ ಮೂಲಕ ಕರಾಳ ದಿನವನ್ನು ಆಚರಿಸಿದರು

ವಿವಿಧ ಕಡೆಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ರಾದ ಅಥಾವುಲ್ಲಾ ಜೋಕಟ್ಟೆ, ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ರಿಯಾಝ್ ಫರಂಗಿಪೇಟೆ, ರಾಜ್ಯ ಮುಖಂಡರಾದ ಇಕ್ಬಾಲ್ ಬೆಳ್ಳಾರೆ ಜಿಲ್ಲಾ ನಾಯಕರಾದ IMR ಇಕ್ಬಾಲ್, ಅನ್ವರ್ ಸಾದತ್ ಬಜತ್ತೂರು, ಶಾಹುಲ್ ಹಮೀದ್ ಪರ್ಲಿಯಾ, ಜಮಾಲ್ ಜೋಕಟ್ಟೆ, ಅಶ್ರಫ್ ಮಂಚಿ,ಕಾದರ್ ಫರಂಗಿಪೇಟೆ ಹಾಗೂ ಇತರ ಸ್ಥಳೀಯ ನಾಯಕರು ಬಾಗವಹಿಸಿದರು ಎಂದು SDPI ದ.ಕ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp