ಮಾರ್ಚ್ 10ರಂದು ಪುರಭವನದಲ್ಲಿ ರಕ್ತದಾನ ಶಿಬಿರ, ಬೀದಿ ಬದಿ ವ್ಯಾಪಾರಸ್ಥರ ವಾರ್ಷಿಕ ಸಮ್ಮೇಳನ

Prasthutha|

ಮಂಗಳೂರು: ದ.ಕ. ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಹಭಾಗಿತ್ವದಲ್ಲಿ ಮಾರ್ಚ್ 10ರ ಗುರುವಾರ  ಬೆಳಿಗ್ಗೆ 9-30ಗಂಟೆಯಿಂದ ಮಧ್ಯಾಹ್ನ 2-00ಗಂಟೆಯವರೆಗೆ ಮಂಗಳೂರು ಪುರಭವನದ ಮಿನಿ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನ ಮಹಿಳಾ ಘಟಕದ ಅಧ್ಯಕ್ಷೆ ರುಬಿಯಾ ಅಖ್ತರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

- Advertisement -

ಬೀದಿ ಬದಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಮಾತನಾಡಿ, ಇದೇ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರ ವಾರ್ಷಿಕ ಮಹಾ ಸಮ್ಮೇಳನವೂ ಜರುಗಲಿದ್ದು, ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

ವಾಯ್ಸ್ ಆಫ್ ಬ್ಲಡ್ ಡೋನರ್ಸ್ನ ಸ್ಥಾಪಕಾಧ್ಯಕ್ಷ ರವೂಫ್ ಬಂದರ್,  ಕಾರ್ಯದರ್ಶಿ ಅಲೀಷಾ ಅಮಿನ್,  ಆಸೀಫ್, ಆದಮ್ ಬಜಾಲ್, ನಝೀರ್ ದೇರಳಕಟ್ಟೆ, ಸಾದಿಕ್ ಸಾಲೆತ್ತೂರು ಮತ್ತಿತರರು ಉಪಸ್ಥಿತರಿದ್ದರು.

Join Whatsapp