Home ಟಾಪ್ ಸುದ್ದಿಗಳು ನಾಳೆ (ಸೆ.22) ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ ವತಿಯಿಂದ ಬೃಹತ್ ರಕ್ತದಾನ ಶಿಬಿರ

ನಾಳೆ (ಸೆ.22) ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಮಂಗಳೂರು: ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ, ಇಂಡಿಯನ್ ರೆಡ್ ಕ್ರಾಸ್,ಹಾಗೂ ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಸೆಪ್ಟೆಂಬರ್ 22 ರಂದು ಆಯೋಜಿಸಲಾಗಿದೆ.

ಸೆಪ್ಟೆಂಬರ್ 22 ರವಿವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕುದ್ರೋಳಿಯಲ್ಲಿರುವ ಸರ್ಕಾರಿ ಉರ್ದು ಶಾಲೆಯ ಆವರಣದಲ್ಲಿ ನಡೆಯುವ ಈ ರಕ್ತದಾನ ಶಿಬಿರದಲ್ಲಿ ಎಲ್ಲಾ ಜಾತಿ ಧರ್ಮ ಸಮುದಾಯಗಳ ಜನರು, ಎಲ್ಲಾ ವಯೋಮಾನದವರು, ಸ್ತ್ರೀ ಮತ್ತು ಪುರುಷರು ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕಾಗಿದೆ.

ಹೆಚ್ಚು ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಲು ತಮ್ಮ ಮಾಧ್ಯಮ ವೇದಿಕೆಯಲ್ಲಿ ಈ ಕಾರ್ಯಕ್ರಮದ ಕುರಿತು ಹೆಚ್ಚು ಪ್ರಚಾರ ನೀಡಬೇಕಾಗಿ ಈ ಮೂಲಕ ಕೋರುತ್ತಿದ್ದೇವೆ ಎಂದು ಆಯೋಜಕರು ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸನ್ಮಾನ್ಯ
ಯು.ಟಿ. ಖಾದರ್. ಐವನ್ ಡಿಸೋಜಾ. ಪದ್ಮರಾಜ್. ಇನಾಯತ್ ಅಲಿ ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

Join Whatsapp
Exit mobile version