ಓವರ್’ಟೇಕ್ ಮಾಡುವಾಗ ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

Prasthutha|

ಬೆಂಗಳೂರು: ಓವರ್ ಟೇಕ್ ಭರದಲ್ಲಿ ಬೈಕ್ ಸವಾರ  ಬಿಎಂಟಿಸಿ  ಬಸ್’ನ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಪೀಣ್ಯದ ಬಳಿ ನಿನ್ನೆ ರಾತ್ರಿ ನಡೆದಿದೆ.

- Advertisement -

ವಾರಣಾಸಿ ಮೂಲದ ದೀಪಕ್ (30) ಮೃತ ಯುವಕ. ರಾತ್ರಿ 7:45ರ ಸುಮಾರಿಗೆ ಪೀಣ್ಯದ 14ನೇ ಕ್ರಾಸ್’ನ ಪೀಣ್ಯ ಪೊಲೀಸ್ ಠಾಣೆ ಮಾರ್ಗವಾಗಿ ಕಾಮಾಕ್ಷಿಪಾಳ್ಯದ ಕಡೆ ಬೈಕ್’ನಲ್ಲಿ ಹೋಗುತ್ತಿದ್ದ ದೀಪಕ್, ಮುಂದೆ ಹೋಗುತ್ತಿದ್ದ ಬಿಎಂಟಿಸಿ ಬಸ್ಸನ್ನು ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ.

ಮಾರ್ಗದ ಎಡಭಾಗದಲ್ಲಿ ಮುಂದೆ ಬರಲು ಯತ್ನಿಸಿದ ಆತ ಬಸ್’ನ ಹಿಂಬದಿ ಟಯರ್’ಗೆ ಸಿಲುಕಿ ಮೃತಪಟ್ಟಿದ್ದಾನೆ.

- Advertisement -

ದೀಪಕ್ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಮೂರು ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ ದೀಪಕ್ ಎಸ್ಎಸ್ ಫ್ಯಾಬ್ ಕಂಪನಿಯಲ್ಲಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೀಣ್ಯ ಸಂಚಾರ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡದು ವಿಚಾರಣೆ ನಡೆಸಿದ್ದಾರೆ ಎಂದು ಡಿಸಿಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

Join Whatsapp