Home ಕರಾವಳಿ ಕಾಸರಗೋಡು: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೂವರು ನಾಪತ್ತೆ

ಕಾಸರಗೋಡು: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೂವರು ನಾಪತ್ತೆ

ಕಾಸರಗೋಡು: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಇಂದು ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು, ನಾಲ್ವರು ಈಜಿ ದಡ ಸೇರಿದ್ದಾರೆ. ಸದ್ಯ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಾಪತ್ತೆಯಾದ ಯುವಕರಾದ ಸಂದೀಪ್, ಕಾರ್ತಿಕ್ ಹಾಗೂ ರತೀಶ್ ಗಾಗಿ ಹುಡುಕಾಟ ಮುಂದುವರಿದಿದೆ. ದೋಣಿ ಮಗುಚಲು ಕಾರಣವೇನೆಂಬುದು ತಿಳಿದುಬಂದಿಲ್ಲ.

Join Whatsapp
Exit mobile version