ಉಡುಪಿ: ದೋಣಿ ಮಗುಚಿ ಬಿದ್ದು ಈದ್ ಆಚರಣೆಗೆ ಸಂಬಂಧಿಕರ ಮನೆಗೆ ಬಂದಿದ್ದ ನಾಲ್ವರು ಯುವಕರು ಮೃತ್ಯು

Prasthutha|

ಬ್ರಹ್ಮಾವರ: ದೋಣಿ ಮಗುಚಿ ಬಿದ್ದು ನಾಲ್ವರು ಯುವಕರು ಮೃತಪಟ್ಟ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕುಡೆ ಕುದ್ರು ಎಂಬಲ್ಲಿ ನಡೆದಿದೆ.

- Advertisement -

ಮೃತಪಟ್ಟವರ ಪೈಕಿ ಮೂವರ ಮೃತದೇಹ ಪತ್ತೆಯಾಗಿದ್ದು, ಓರ್ವನ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಈದ್ ಆಚರಣೆಗೆಂದು ತನ್ನ ಮನೆಗೆ ಬಂದಿದ್ದ 6 ಮಂದಿ ಯುವಕರೊಂದಿಗೆ ಹೂಡೆ ನಿವಾಸಿ ಫೈಝಾನ್ ದೋಣಿಯಲ್ಲಿ ತೆರಳುವಾಗ ಅವಘಡ ನಡೆದಿದೆ ಎನ್ನಲಾಗಿದೆ.

- Advertisement -

ಒಟ್ಟು ಏಳು ಮಂದಿ ವಾಯು ವಿಹಾರಕ್ಕೆಂದು ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡೆ ಕುದ್ರುವಿಗೆ ತೆರಳುತ್ತಿದ್ದಾಗ ದೋಣಿ ಮಗುಚಿದ್ದು, 7 ಮಂದಿಯಲ್ಲಿ ಮೂವರು ಈಜಿ ದಡ ಸೇರಿದ್ದಾರೆ. ಉಳಿದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Join Whatsapp