Home ಕರಾವಳಿ ಉಡುಪಿ: ದೋಣಿ ಮಗುಚಿ ಬಿದ್ದು ಈದ್ ಆಚರಣೆಗೆ ಸಂಬಂಧಿಕರ ಮನೆಗೆ ಬಂದಿದ್ದ ನಾಲ್ವರು ಯುವಕರು ಮೃತ್ಯು

ಉಡುಪಿ: ದೋಣಿ ಮಗುಚಿ ಬಿದ್ದು ಈದ್ ಆಚರಣೆಗೆ ಸಂಬಂಧಿಕರ ಮನೆಗೆ ಬಂದಿದ್ದ ನಾಲ್ವರು ಯುವಕರು ಮೃತ್ಯು

ಬ್ರಹ್ಮಾವರ: ದೋಣಿ ಮಗುಚಿ ಬಿದ್ದು ನಾಲ್ವರು ಯುವಕರು ಮೃತಪಟ್ಟ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕುಡೆ ಕುದ್ರು ಎಂಬಲ್ಲಿ ನಡೆದಿದೆ.

ಮೃತಪಟ್ಟವರ ಪೈಕಿ ಮೂವರ ಮೃತದೇಹ ಪತ್ತೆಯಾಗಿದ್ದು, ಓರ್ವನ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಈದ್ ಆಚರಣೆಗೆಂದು ತನ್ನ ಮನೆಗೆ ಬಂದಿದ್ದ 6 ಮಂದಿ ಯುವಕರೊಂದಿಗೆ ಹೂಡೆ ನಿವಾಸಿ ಫೈಝಾನ್ ದೋಣಿಯಲ್ಲಿ ತೆರಳುವಾಗ ಅವಘಡ ನಡೆದಿದೆ ಎನ್ನಲಾಗಿದೆ.

ಒಟ್ಟು ಏಳು ಮಂದಿ ವಾಯು ವಿಹಾರಕ್ಕೆಂದು ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡೆ ಕುದ್ರುವಿಗೆ ತೆರಳುತ್ತಿದ್ದಾಗ ದೋಣಿ ಮಗುಚಿದ್ದು, 7 ಮಂದಿಯಲ್ಲಿ ಮೂವರು ಈಜಿ ದಡ ಸೇರಿದ್ದಾರೆ. ಉಳಿದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Join Whatsapp
Exit mobile version