ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಉಡುಪಿಯ ಬೋಟ್ ಅವಘಡ | 8 ಮಂದಿಯ ರಕ್ಷಣೆ

Prasthutha|

ಕಾರವಾರ : ಮೀನುಗಾರಿಕೆಗೆ ತೆರಳಿದ್ದ ಉಡುಪಿ ಮೂಲದ ಬೋಟ್ ಒಂದರ ತಳಭಾಗದ ಫೈಬರ್ ಒಡೆದು, ಸಮುದ್ರದಲ್ಲಿ ಮುಳುಗಡೆಯಾಗುತ್ತಿದ್ದ 8 ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಮತ್ತು ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.

- Advertisement -

ಉಡುಪಿಯ ಶ್ರೀ ಸೌಪರ್ಣಿಕಾ ಎಂಬ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಕಾರವಾರ ಭಾಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿಯೇ ಬೋಟ್ ತಳಭಾಗದ ಫೈಬರ್ ಒಡೆದು ಹೋಗಿತ್ತು.

ಹೀಗಾಗಿ ಬೋಟ್ ಸಂಪೂರ್ಣ ಮುಳುಗುವ ಹಂತದಲ್ಲಿತ್ತು. ಈ ವೇಳೆ ಬೋಟ್ ನಲ್ಲಿದ್ದ ಮೀನುಗಾರರು ರಕ್ಷಣೆ ಮಾಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಕರಾವಳಿ ಕಾವಲು ಪಡೆಯ ನಿಶ್ಚಲ್ ಕುಮಾರ್ ಹಾಗೂ ಕೋಸ್ಟ್ ಗಾರ್ಡ್ ನ ಅಸಿಸ್ಟೆಂಟ್ ಕಮಾಂಡೆಂಟ್ ಶಶಾಂಕ್ ಕುಮಾರ್ ಅವರ ತಂಡ ಮುಳುಗಡೆಯಾಗುತ್ತಿದ್ದ ಬೋಟ್ ಹಾಗೂ ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿದೆ.

Join Whatsapp