ಈಜಲು ಹೋಗಿ ನೀರುಪಾಲಾದ ಮೂವರು ಯುವಕರ ಮೃತದೇಹಗಳು ಪತ್ತೆ

Prasthutha|

ಹಾವೇರಿ: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಮೂವರು ಯುವಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ.

- Advertisement -


ವಿಕಾಸ್ ಪಾಟೀಲ್ (20 ವರ್ಷ), ನವೀನ್ ಕುರಗುಂದ (20) ಮತ್ತು ನೆಪಾಳದ ಮೂಲದ ಪ್ರೇಮ್ ಬೋರಾ (25) ಮೃತದೇಹಗಳು ಪತ್ತೆಯಾಗಿವೆ.
ನೀರುಪಾಲಾದ ಯುವಕರ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನಿರಂತರವಾಗಿ ಶೋಧಕಾರ್ಯ ನಡೆಸಿದ್ದರು.


ಹೊಸ ವರ್ಷ ನಿಮಿತ್ತ ಜನವರಿ 1 ರಂದು ಪಾರ್ಟಿ ಮಾಡಲು ತುಂಗಭದ್ರಾ ನದಿಯ ಪಂಪಹೌಸ್ ಬಳಿ ಯುವಕರು ಹೋಗಿದ್ದರು.
ಅಲ್ಲಿಂದ ಈಜಲು ಹೋದ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.



Join Whatsapp