ರೈಲ್ವೆ ಹಳಿ ಬಳಿ  ಯುವಕ, ಯುವತಿಯ ಮೃತದೇಹ ಪತ್ತೆ

Prasthutha|

ಬೆಂಗಳೂರು: ಚಿಕ್ಕಬಾಣಾವರದ ಹುಸ್ಕೂರು ಗ್ರಾಮದ ರೈಲ್ವೆ ಹಳಿ ಬಳಿ ಅನುಮಾನಾಸ್ಪದ ರೀತಿಯಲ್ಲಿ ಯುವಕ, ಯುವತಿಯ ಮೃತದೇಹ ಪತ್ತೆಯಾಗಿದೆ.

- Advertisement -

ಮೃತ ಯುವಕನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಯುವತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ಚಿಕ್ಕಬಾಣಾವರ ಹಾಗೂ ಗೊಲ್ಲಹಳ್ಳಿ ರೈಲು ನಿಲ್ದಾಣಗಳ ನಡುವಿನ ಹುಸ್ಕೂರು ರೈಲ್ವೆ ನಿಲ್ದಾಣದಲ್ಲಿ ಇಬ್ಬರ ಶವ ಪತ್ತೆಯಾಗಿದೆ.

- Advertisement -

ಪರಸ್ಪರ ಪ್ರೀತಿಸುತ್ತಿದ್ದ ಯುವಕ- ಯುವತಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು ಎನ್ನಲಾಗಿದೆ. ಸದ್ಯ ಇವರ ಮೃತದೇಹ ರೈಲು ಹಳಿ ಬಳಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಚಲಿಸುವ ರೈಲಿಗೆ ಸಿಲುಕಿ ಇವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸುದ್ದಿ ತಿಳಿದ ತಕ್ಷಣವೇ ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp