ನ್ಯಾಷನಲ್ ಕಾನ್ಫರೆನ್ಸ್ ನಾಯಕನ ಮೃತದೇಹ ದೆಹಲಿಯ ಫ್ಲಾಟ್ ನಲ್ಲಿ ಪತ್ತೆ

Prasthutha|

ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ನಾಯಕ ತ್ರಿಲೋಚನ್ ಸಿಂಗ್ ವಾಜೀರ್ ಅವರ ಮೃತದೇಹ ಇಂದು ಬೆಳಿಗ್ಗೆ ದೆಹಲಿಯ ಫ್ಲಾಟ್ ವೊಂದರಲ್ಲಿ ಪತ್ತೆಯಾಗಿದೆ.

- Advertisement -

ಪಶ್ಚಿಮ ದೆಹಲಿಯ ಮೋತಿ ನಗರದಲ್ಲಿರುವ ಫ್ಲಾಟ್ ನಲ್ಲಿ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ಮಾಜಿ ಶಾಸಕರಾಗಿರುವ ತ್ರಿಲೋಚನ್ ಅವರು ಟ್ರಾನ್ಸ್ ಪೋರ್ಟ್ ಅನ್ನು ನಡೆಸುತ್ತಿದ್ದರು.

- Advertisement -

ಇವರ ಅಕಾಲಿಕ ನಿಧನಕ್ಕೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು ಟ್ವೀಟ್ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Join Whatsapp