ಪಶ್ಚಿಮ ಬಂಗಾಳದಲ್ಲಿ ಬಾಂಬ್ ದಾಳಿ | ಟಿಎಂಸಿ ಕಾರ್ಯಕರ್ತ ಸಾವು; ಬಿಜೆಪಿ ಕೈವಾಡದ ಆರೋಪ

Prasthutha|

ಕೊಲ್ಕತಾ : ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರದಲ್ಲಿ ಬಾಂಬ್ ದಾಳಿಯೊಂದರಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಾವಿಗೀಡಾಗಿದ್ದಾರೆ. ಮೂವರು ಕಾರ್ಯಕರ್ತರು ಗಂಭೀರ ಗಾಯಗೊಂಡಿದ್ದಾರೆ.

- Advertisement -

ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಬಾಂಬ್ ದಾಳಿಯಲ್ಲಿ ಮೃತಪಟ್ಟವರನ್ನು ಸೌವಿಕ್ ದೊಲೈ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮಕ್ರಾಂಪುರದಲ್ಲಿ ರಾತ್ರಿ ರಸ್ತೆ ಬದಿ ಮಾತನಾಡುತ್ತಾ ನಿಂತಿದ್ದಾಗ, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾಂಬ್ ಎಸೆದು ಪರಾರಿಯಾಗಿದ್ದಾರೆ. ಅಲ್ಲದೆ, ದೊಲೈ ಮೇಲೆ ಗುಂಡು ಕೂಡ ಹಾರಿಸಿದ್ದಾರೆ. ಹೀಗಾಗಿ, ದೊಲೈ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

- Advertisement -

ಘಟನೆಗೆ ಬಿಜೆಪಿಯವರೇ ಕಾರಣ ಎಂದು ಸ್ಥಳೀಯ ಟಿಎಂಸಿ ನಾಯಕರು ಆರೋಪಿಸಿದ್ದಾರೆ. ನಾವು ಹಿಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಉತ್ತಮ ಮತ ಪಡೆದಿದ್ದೆವು. ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ, ನಮ್ಮನ್ನು ಗೆಲುವಿನಿಂದ ತಡೆಯಲು ಈ ರೀತಿ ಮಾಡಲಾಗಿದೆ. ಇದು ಬಿಜೆಪಿಯದ್ದೇ ಕೆಲಸ ಎಂದು ಟಿಎಂಸಿ ಜಿಲ್ಲಾ ಅಧ್ಯಕ್ಷ ಅಜಿತ್ ಮೈಟಿ ಆರೋಪಿಸಿದ್ದಾರೆ.

ಟಿಎಂಸಿ ಒಳಜಗಳದಿಂದ ಈ ಘಟನೆ ನಡೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಮಿತ್ ದಾಸ್ ಆರೋಪಿಸಿದ್ದಾರೆ.  

Join Whatsapp