ಬಾಂಬ್ ಬ್ಲಾಸ್ಟ್ ಪ್ರಕರಣ ಬಿಜೆಪಿಯ ಚುನಾವಣಾ ಗಿಮಿಕ್: ಹಿಂದೂ ಮಹಾಸಭಾ

Prasthutha|

- Advertisement -

ಬೆಂಗಳೂರು: ಬಾಂಬ್ ಬ್ಲಾಸ್ಟ್ ಪ್ರಕರಣ ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷರಾದ ರಾಜೇಶ್ ಪವಿತ್ರ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಮುಂಬರುವ ವಿಧಾನಸಭಾ ಚುನಾವಣೆಯ ಸೋಲನ್ನು ಮನಗಂಡ ಬಿಜೆಪಿಯು ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಹುಟ್ಟು ಹಾಕಿದೆ ಎಂದು ಆರೋಪಿಸಿದರು.

- Advertisement -

 ‘ಅತಂಕವಾದ ಅಳಿಸಿ, ದೇಶ ಉಳಿಸಿ’ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯದ ಮೌಲ್ಯವನ್ನು ಬಿಜೆಪಿಯು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ. ಆಡಳಿತದಲ್ಲಿರುವ ಸರಕಾರದ ವೈಫಲ್ಯವೇ ಈ ಘಟನೆಗೆ ಕಾರಣ ಎಂದು ರಾಜೇಶ್ ಪವಿತ್ರ ಆಕ್ರೋಶ ವ್ಯಕ್ತಪಡಿಸಿದರು.


ಡಬಲ್ ಇಂಜಿನ್ ಸರಕಾರ ಎಂದು ಬಡಾಯಿ ಕೊಚ್ಚುವ ಬಿಜೆಪಿ ಸರಕಾರ ಇನ್ನಾದರೂ ಚುನಾವಣೆ ಗಿಮಿಕ್ ಅನ್ನು ಬಿಟ್ಟು, ರಾಜ್ಯದ ಜನರ ಜೀವ ಹಾಗೂ ಜೀವನದ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದರು

Join Whatsapp