ಕರ್ನಾಟಕ ಎಕ್ಸ್ ಪ್ರೆಸ್ ರೈಲಿಗೆ ಬಾಂಬ್‌ ಬೆದರಿಕೆ ಕರೆ: ಪೊಲೀಸರಿಂದ ಶೋಧ

Prasthutha|

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕರ್ನಾಟಕ ಎಕ್ಸ್ ಪ್ರೆಸ್ ರೈಲ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ ಘಟನೆ ನಡೆದಿದ್ದು, ತಪಾಸಣೆಯ ಬಳಿಕ ಇದು ಹುಸಿ ಕರೆ ಎಂಬುದು ಸಾಬೀತಾಗಿದೆ.

- Advertisement -

ಬೆದರಿಕೆ ಕರೆ ಹಿನ್ನೆಲೆಯಲ್ಲಿ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲೂ ರೈಲನ್ನು ತೀವ್ರ ತಪಾಸಣೆ ನಡೆಸಲಾಗಿದೆ.

ಮಂಗಳವಾರ ಸಂಜೆ ಆಗ್ರಾದ ರೈಲ್ವೆ ನಿಯಂತ್ರಣ ಕೊಠಡಿಯಿಂದ ಕರ್ನಾಟಕದ ಸರ್ಕಾರಿ ರೈಲ್ವೆ ಪೊಲೀಸ್(GRP)ಗೆ ಹುಸಿ ಬಾಂಬ್ ಬೆದರಿಕೆ ಕರೆ ಬಗ್ಗೆ ಮಾಹಿತಿ ನೀಡಲಾಗಿದೆ.

- Advertisement -

ರೈಲಿನಲ್ಲಿರುವ ತನ್ನ ಪುರುಷ ಸಂಬಂಧಿಯೊಬ್ಬರ ಬಳಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬರು ಪೊಲೀಸ್ ಕಂಟ್ರೋಲ್ ರೂಮ್  ಕರೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ರೈಲನ್ನು ತಪಾಸಣೆ ನಡೆಸಿದ್ದಾರೆ.

Join Whatsapp