Home ಟಾಪ್ ಸುದ್ದಿಗಳು ಪುದುಚೇರಿಯಲ್ಲಿ ‘ಬಾಂಬೆ ಮಿಠಾಯಿ’ ನಿಷೇಧ

ಪುದುಚೇರಿಯಲ್ಲಿ ‘ಬಾಂಬೆ ಮಿಠಾಯಿ’ ನಿಷೇಧ

ನವದೆಹಲಿ: ಬಾಂಬೆ ಮಿಠಾಯಿ (ಕಾಟನ್ ಕ್ಯಾಂಡಿ)ಯನ್ನು ಪುದುಚೇರಿಯಲ್ಲಿ ನಿಷೇಧಿಸಲಾಗಿದೆ. ಅದರಲ್ಲಿ ಆರೋಗ್ಯಕ್ಕೆ ಹಾನಿಕರ¬ವಾದ ರೊಡಮೈನ್-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿ-ರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹಾಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್ ಗವರ್ನರ್ ತಮಿಳ್ ಸಾಯಿ ಸುಂದರರಾಜನ್ ಹೇಳಿದ್ದಾರೆ.


ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಶುಕ್ರವಾರ ಹೊರಡಿಸಿದ ಆದೇಶದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಮಾರಾಟವಾಗುತ್ತಿದ್ದ ಕಾಟನ್ ಕ್ಯಾಂಡಿಯಲ್ಲಿ ‘ರೋಡಮೈನ್-ಬಿ’ ಎಂಬ ಹಾನಿಕಾರಕ ರಾಸಾಯನಿಕ ಅಂಶವನ್ನು ಪರೀಕ್ಷಿಸಿದಾಗ ಕಂಡುಬಂದಿದೆ. ಇದರ ಬೆನ್ನಲ್ಲೇ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

Join Whatsapp
Exit mobile version