Home ಟಾಪ್ ಸುದ್ದಿಗಳು ಹಿಜಾಬ್ ಪ್ರಕರಣ | ಕುರ್ಚಿಗಾಗಿ RSS ತಾಳಕ್ಕೆ ಕುಣಿಯುತ್ತಿರುವ ಬೊಮ್ಮಾಯಿ: ಪ್ರಿಯಾಂಕ್ ಖರ್ಗೆ ಟೀಕೆ

ಹಿಜಾಬ್ ಪ್ರಕರಣ | ಕುರ್ಚಿಗಾಗಿ RSS ತಾಳಕ್ಕೆ ಕುಣಿಯುತ್ತಿರುವ ಬೊಮ್ಮಾಯಿ: ಪ್ರಿಯಾಂಕ್ ಖರ್ಗೆ ಟೀಕೆ

ಚಿತ್ತಾಪುರ: ಸಿಎಂ  ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಆರ್‌ಎಸ್ ಎಸ್ ನ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಶಾಸಕ ಹಾಗೂ‌ ಕೆಪಿಸಿಸಿ‌ ವಕ್ತಾರ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಈ ಬಗ್ಗೆ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಕೋವಿಡ್‌ ನಿಂದಾಗಿ ಶಾಲೆಗಳು ಬಂದ್ ಆಗಿ ಶಿಕ್ಷಣ ವ್ಯವಸ್ಥೆ ಹಾಳಾಗಿದೆ. ಆದರೂ ಈಗ ಎದ್ದಿರುವ ವಿವಾದದಿಂದಾಗಿ ಶಾಲೆ ಬಂದ್ ಮಾಡುವ ನಿರ್ಧಾರವನ್ನು ಶಾಲಾ ಸಮಿತಿಗೆ ಬಿಡಲಾಗಿದೆ. ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಮಕ್ಕಳ ಶಿಕ್ಷಣದ ಬಗ್ಗೆ ಗಾಂಭೀರ್ಯತೆ ಇಲ್ಲದ ಸರ್ಕಾರ ಕತ್ತೆ ಕಾಯುತ್ತಿದೆಯಾ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಗುಪ್ತಚರ ಇಲಾಖೆ ಏನು ಮಾಡುತ್ತಿದೆ. ಕೇಸರಿ ಶಾಲು ಹಂಚುತ್ತಿರುವುದು ಯಾರು? ರಾಷ್ಟ್ರ ಧ್ವಜದ ಸ್ಥಂಭದಲ್ಲಿ ಕೇಸರಿ ಧ್ಚಜ ಹಾರಿಸಿದ್ದು ಯಾರು? ಈ ಬಗ್ಗೆ ಮಾಹಿತಿ‌ ಇಲ್ಲವೇ? ಗೃಹ ಸಚಿವರು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ‌. ಗೃಹ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಅವರೇ ಹೇಳಿದ್ದಾರೆ. ಹೀಗಿರುವಾಗ ಕಾನೂನು ಸುವ್ಯವಸ್ಥೆ ಕುಸಿಯುತ್ತದೆ’ ಎಂದರು.

‘ಕೇರಳ ಹೈಕೋರ್ಟ್ ಹಾಗೂ ಸುಪ್ರಿಂ ಕೋರ್ಟ್ ಧಾರ್ಮಿಕ ವಿಚಾರದ ಬಗ್ಗೆ ಸ್ಪಷ್ಟವಾಗಿ ತಿಳಿಸಿವೆ. ಕೈಬಳೆ, ಕುಂಕುಮ, ತಾಯತ, ಹಿಜಾಬ್‌ಗಳು ಹಾಗೂ ಸಿಖ್ಖರ ಪೇಟ ಆಯಾ ಧರ್ಮದ ಸಂಪ್ರದಾಯಗಳು ಎಂದು ಹೇಳಿವೆ. ಆದರೆ ಕೇಸರಿ‌ಶಾಲು ಏನು? ಇದು ಯಾವ ಧರ್ಮದ ಸಂಕೇತ?’ ಎಂದು ಪ್ರಶ್ನಿಸಿದರು.

Join Whatsapp
Exit mobile version