ಬೊಮ್ಮಾಯಿಯವರೇ ‘ಕ್ರಿಯೆಗೆ ಪ್ರತಿಕ್ರಿಯೆ’ಯ ಮೊಂಡುವಾದ ಮಂಡಿಸದೆ ಕಾನೂನು ಕ್ರಮ ಜರುಗಿಸಿ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಮತ್ತು ಕನ್ನಡ ಪರ ಸಂಘಟನೆಯ ಮದ್ಯೆ ಏರ್ಪರ್ಟಿರುವ ಘರ್ಷಣೆಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಕಿಡಿಕಾರಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ‌ ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -

ಅಲ್ಲದೇ ಈ ಘಟನೆಯಲ್ಲೂ ಬೊಮ್ಮಾಯಿಯವರೇ ನೀವು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ ಎಂದಿದ್ದಾರೆ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ, ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು‌ ಬರಬೇಕೆಂದು‌ ಮನವಿಯನ್ನು ಮಾಡಿದ್ದಾರೆ.

Join Whatsapp