ಬೊಮ್ಮಾಯಿಯ ಹನಿಮೂನ್ ಅವಧಿ ಕೊನೆಗೊಂಡಿದೆ: ಸಿದ್ದರಾಮಯ್ಯ ವ್ಯಂಗ್ಯ

Prasthutha|

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಉಪಚುನಾವಣಾ ಫಲಿತಾಂಶ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ನಾನು ಹೇಳುವುದಿಲ್ಲ. ಆದರೆ ಬೊಮ್ಮಾಯಿ ಅವರ ಹನಿಮೂನ್ ಅವಧಿ ಕೊನೆಗೊಂಡಿದೆ. ಈ ಉಪಚುನಾವಣೆ ಸೆಮಿಫೈನಲ್, 2023ರ ವಿಧಾನಸಭಾ ಚುನಾವಣೆ ಫೈನಲ್, ಅದರಲ್ಲಿಯೂ ನಾವೇ ಗೆಲ್ಲುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

- Advertisement -


ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹಾನಗಲ್, ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡು ಹೀನಾಯ ಸೋಲು ಅನುಭವಿಸಿದ್ದಾರೆ. ಎಚ್ ಡಿ ದೇವೇಗೌಡ ಅವರು 10 ದಿನ ಬಂದು ಪ್ರಚಾರ ಮಾಡಿದ್ದರೂ ಹೀನಾಯ ಸೋಲು ಕಂಡಿದೆ. ಅವರ ಪಕ್ಷದ ಸ್ಥಾನ ಏನೆಂಬುದನ್ನು ಎರಡೂ ಕ್ಷೇತ್ರಗಳ ಮತದಾರರೇ ತೋರಿಸಿದ್ದಾರೆ, ನಾನು ಟಿಪ್ಪಣಿ ಮಾಡುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Join Whatsapp