Home ಟಾಪ್ ಸುದ್ದಿಗಳು ಗಡಿ ವಿವಾದ| ಉಭಯ ರಾಜ್ಯಗಳ ಮುಖ್ಯಮಂತ್ರಿ, ಗೃಹ ಸಚಿವರ ಜೊತೆ ಅಮಿತ್ ಶಾ ಸಭೆ

ಗಡಿ ವಿವಾದ| ಉಭಯ ರಾಜ್ಯಗಳ ಮುಖ್ಯಮಂತ್ರಿ, ಗೃಹ ಸಚಿವರ ಜೊತೆ ಅಮಿತ್ ಶಾ ಸಭೆ

ಹೊಸದಿಲ್ಲಿ: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯ ಗಳ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ದು, ಎರಡೂ ರಾಜ್ಯಗಳ ನಡುವೆ ಇರುವ, ಗಡಿ ಸಮಸ್ಯೆ ಕುರಿತು ಚರ್ಚಿಸಿದರು.

ಕರ್ನಾಟಕ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಮತ್ತು, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂದೆ ಹಾಗೂ ಉಪ ಮುಖ್ಯಮಂತ್ರಿ  ಶ್ರೀ ದೇವೇಂದ್ರ ಫಡ್ನವೀಸ್ ಹಾಗೂ ಎರಡೂ ರಾಜ್ಯಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp
Exit mobile version