ರಾಜ್ಯದ ಗಂಭೀರ ಸಮಸ್ಯೆಗಳನ್ನು ಮರೆಮಾಚಲು ಗಡಿ ವಿವಾದ ಸೃಷ್ಟಿ: ಡಿ.ಕೆ.ಶಿವಕುಮಾರ್

Prasthutha|

ಬೆಂಗಳೂರು: ಮಹಾರಾಷ್ಟ್ರ ಜತೆಗಿನ ಗಡಿ ವಿವಾದದ ಬಗ್ಗೆ ಮುಖ್ಯಮಂತ್ರಿಗಳ ಮಾತಿಗೆ ಪ್ರಾಮುಖ್ಯತೆ ನೀಡುತ್ತೇನೆ. ಬೇರೆಯವರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರು ತಮ್ಮ ಪಕ್ಷದಲ್ಲಿ ಆಂತರಿಕ ಒಪ್ಪಂದ ಮಾಡಿಕೊಂಡು, ರಾಜ್ಯದ ಗಂಭೀರ ವಿಚಾರಗಳನ್ನು ಮರೆಮಾಚಲು ಈ ವಿವಾದ ಎಬ್ಬಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

- Advertisement -

ಡಿ.6 ರಂದು ಮಹಾರಾಷ್ಟ್ರ ಸಚಿವರು ಬೆಳಗಾವಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವ ಸಲಹೆ ನೀಡುತ್ತೀರಿ ಎಂದು ಕೇಳಿದಾಗ, ‘ ಸರ್ಕಾರ ನಮ್ಮ ಅಭಿಪ್ರಾಯ ಕೇಳಿದರೆ ನಾವು ಸಲಹೆ ನೀಡಬಹುದು. ಆದರೆ ಅವರು ಪ್ರಮುಖ ವಿಚಾರ ಮರೆಮಾಚಲು ಈ ವಿವಾದ ಬಳಸಿಕೊಳ್ಳುತ್ತಿದ್ದಾರೆ ‘ ಎಂದರು.

ಚುನಾವಣಾ ಸಮಿತಿ ರಚನೆ ಹಾಗೂ ಚುನಾವಣೆ ಟಿಕೆಟ್ ಮೊದಲ ಪಟ್ಟಿ ಬಗ್ಗೆ ಕೇಳಿದ ಪ್ರಶ್ನೆಗೆ, ‘ ಆದಷ್ಟು ಶೀಘ್ರವಾಗಿ ಪಟ್ಟಿ ಬರಲಿದೆ ‘ ಎಂದರು.

Join Whatsapp