ತಾಯಿ ಊಟ ಬಡಿಸದಿದ್ದರಿಂದ ನೊಂದ ಬಾಲಕ ಆತ್ಮಹತ್ಯೆ

Prasthutha|

ಉಡುಪಿ: ತಾಯಿ ಊಟ ಬಡಿಸಲಿಲ್ಲ ಎಂಬ ಕಾರಣಕ್ಕೆ ನೊಂದ ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದ ಕಾರ್ಕಡದಲ್ಲಿ ನಡೆದಿದೆ.

- Advertisement -


ಕಾರ್ಕಡದ ಲಕ್ಷ್ಮೀ ಅವರ ಪುತ್ರ ನಾಗೇಂದ್ರ (14) ಮೃತಪಟ್ಟ ಬಾಲಕನಾಗಿದ್ದಾನೆ.
ನಾಗೇಂದ್ರ ಕೋಟ ವಿವೇಕ ಹೈಸ್ಕೂಲಿನಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ. ತಾಯಿ ಲಕ್ಷ್ಮೀ ಕಾರ್ಕಡದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು.


ಮಳೆ ಕಾರಣಕ್ಕೆ ಶಾಲೆಗೆ ರಜೆ ಇದ್ದ ಕಾರಣ ನಾಗೇಂದ್ರ ಕಾರ್ಕಡದ ಶಾಲಾ ಮೈದಾನದಲ್ಲಿ ಆಟವಾಡಲು ಹೋಗಿದ್ದು, ಮಧ್ಯಾಹ್ನ ಮನೆಗೆ ಬಂದವ ತನಗೆ ಊಟ ಬಡಿಸುವಂತೆ ತಾಯಿಗೆ ಹೇಳಿದ್ದಾನೆ.

- Advertisement -


ಕ್ಯಾಂಟೀನ್ ನಲ್ಲಿ ಗ್ರಾಹಕರಿದ್ದ ಕಾರಣಕ್ಕೆ ಮನೆಗೆ ಹೋಗಿ ಊಟ ಹಾಕಿಕೊಂಡು ತಿನ್ನುವಂತೆ ತಾಯಿ ತಿಳಿಸಿದ್ದಾರೆ. ಇದರಿಂದ ಕೋಪಗೊಂಡ ಮಗ ಮನೆಯಲ್ಲಿ ಬಟ್ಟೆ ಒಣಗಿಸಲು ಕಟ್ಟಿದ್ದ ಹಗ್ಗದಿಂದ ನೇಣು ಬಿಗಿದು ಸಾವಿಗೆ ಶರಣಾಗಿದ್ದಾನೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp