ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು

Prasthutha|

ಧಾರವಾಡ: ಆಟ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಧಾರವಾಡದ ಮದಿಹಾಳ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.

- Advertisement -


ಶ್ರೇಯಸ್ ಸಿನ್ನೂರು (16) ಮೃತ ಬಾಲಕ.


ವಿದ್ಯುತ್ ತಂತಿ ತಗುಲಿದ ತಕ್ಷಣ ಬಿಡಿಸಲು ಹೋಗಿದ್ದ ಮತ್ತೋರ್ವ ಬಾಲಕ ಗಾಯಗೊಂಡಿದ್ದಾರೆ. ಶ್ರೇಯಸ್ ಸ್ನೇಹಿತ ಪ್ರಣವ್ ಕೈಗೆ ಗಾಯವಾಗಿದೆ. ಸಂಜೆ ವೇಳೆ ಮನೆಯ ಮೇಲೆ ಹತ್ತಿದ ಬಾಲಕ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದು, ಇನ್ನು ಗಾಯಗೊಂಡ ಪ್ರಣವ್ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Join Whatsapp