ವಿದ್ಯುತ್ ತಂತಿ ತಗುಲಿ ಬಾಲಕ ಸಾವು

Prasthutha|

ಮೈಸೂರು: ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿರುವ ಘಟನೆ ನಂಜನಗೂಡಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಆವರಣದಲ್ಲಿ ಭಾನುವಾರ ನಡೆದಿದೆ.

- Advertisement -

ಮೃತ ಬಾಲಕನನ್ನು ಶಾಲೆಯ ದೈಹಿಕ ಶಿಕ್ಷಕ ಬಸವಣ್ಣ ಅವರ ಪುತ್ರ ನವೀನ್ (7) ಎಂದು ಗುರುತಿಸಲಾಗಿದೆ.

ಶಾಲೆಯ ಡೈನಿಂಗ್ ಹಾಲ್’ನಲ್ಲಿ ಬಾಟಲಿಗೆ ನೀರು ತುಂಬಿಸುತ್ತಿದ್ದ  ವೇಳೆ ಘಟನೆ ನಡೆದಿದ್ದು, ತಕ್ಷಣವೇ ಮಗುವನ್ನು ನಂಜನಗೂಡಿನ ಕೃಷ್ಣಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.  

- Advertisement -

ಆಕಸ್ಮಿಕವಾಗಿ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಡಿವೈಎಸ್ಪಿ ಗೋವಿಂದರಾಜು, ಪಿಎಸ್‌ ಐ ಆರತಿ ಭೇಟಿ ನೀಡಿ ಘಟನೆಯ ಮಾಹಿತಿ ಕಲೆ ಹಾಕಿದ್ದಾರೆ.

Join Whatsapp