ಕೈತೊಳೆಯಲು ನದಿಗೆ ಇಳಿದ ಬಾಲಕ ಶವವಾಗಿ ಪತ್ತೆ

Prasthutha|

ಯಲ್ಲಾಪುರ: ನದಿಗೆ ಕೈ ತೊಳೆಯಲು ಹೋದ ಬಾಲಕ ಶವವಾಗಿ ಪತ್ತೆಯಾಗಿರುವ ಘಟನೆ ಗುಳ್ಳಾಪುರದಲ್ಲಿ ನಡೆದಿದೆ.

- Advertisement -


ಮೃತ ವಿದ್ಯಾರ್ಥಿಯನ್ನು ಪ್ರಕಾಶ್ ಎಂದು ಗುರುತಿಸಲಾಗಿದೆ. ಗುಳ್ಳಾಪುರ ಸರ್ಕಾರಿ ಪ್ರೌಢಶಾಲೆಯಿಂದ 66 ವಿದ್ಯಾರ್ಥಿಗಳು ಪಿಕ್‌ನಿಕ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಗಂಗಾವಳಿ ನದಿಗೆ ಕೈ ತೊಳೆಯಲು ಇಳಿದ ವಿದ್ಯಾರ್ಥಿ ಪ್ರಕಾಶ್ ನಾಪತ್ತೆಯಾಗಿದ್ದ.


ಸ್ಥಳೀಯ ಮೀನುಗಾರರು ನದಿಯಲ್ಲಿ ತೀವ್ರ ಹುಡುಕಾಟ ನಡೆಸಿದ್ದು, ಸಂಜೆ 5 ಗಂಟೆಯ ಹೊತ್ತಿಗೆ ಮೃತದೇಹ ಪತ್ತೆಯಾಗಿದೆ.‌ ಈ ಕುರಿತು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp