BPL ಕಾರ್ಡ್ ಹಿಂದಿರುಗಿಸದ ಶ್ರೀಮಂತರ ವಿರುದ್ಧ ಕ್ರಮ । ಸಿಎಂ ಯಡಿಯೂರಪ್ಪ ಎಚ್ಚರಿಕೆ

Prasthutha|

ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವ ಶ್ರೀಮಂತರು ಸ್ವಇಚ್ಛೆಯಿಂದ ಹಿಂದಿರುಗಿಸಬೇಕು ಎಂದು ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಒಂದು ವೇಳೆ ಕಾರ್ಡ್ ಹಿಂದಿಸುಗಿಸದೇ ಹೋದಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೂಲಕ ಅಂಥಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

- Advertisement -

ಬಿಪಿಎಲ್ ಕಾರ್ಡ್ ಸೌಲಭ್ಯ ಕೇವಲ ಬಡವರಿಗೆ ಮಾತ್ರ, ಆದ್ದರಿಂದ ಇದುವರೆಗೆ ಬಿಪಿಎಲ್ ಕಾರ್ಡ್ ಮೂಲಕ ಅನಧಿಕೃತವಾಗಿ ಸೌಲಭ್ಯ ಪಡೆಯುತ್ತಿರುವ ಶ್ರೀಮಂತರಿಂದ ಮರಳಿ ಹಣ ವಸೂಲಿ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು.

ಶಿವಮೊಗ್ಗ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಬಿಪಿಎಲ್ ಕಾರ್ಡ್ ಬಳಕೆದಾರರು ಕೂಡಲೇ ಮರಳಿಸಬೇಕು ಎಂದು ತಿಳಿಸಿದರು.

Join Whatsapp