Home ಟಾಪ್ ಸುದ್ದಿಗಳು ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿಯ ಮನೆ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿರುವ ಬ್ರಾಹ್ಮಣ ಸಮಾಜ!

ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿಯ ಮನೆ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿರುವ ಬ್ರಾಹ್ಮಣ ಸಮಾಜ!

ಭೋಪಾಲ್: ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ ನಡೆಸಿದ ಆರೋಪಿಯ ಮನೆ ಪುನರ್‌ನಿರ್ಮಾಣ ಮಾಡಲು ಮಧ್ಯಪ್ರದೇಶದ ‘ಬ್ರಾಹ್ಮಣ ಸಮಾಜ’ವು ದೇಣಿಗೆ ಸಂಗ್ರಹಿಸುವ ಅಭಿಯಾನವನ್ನು ಪ್ರಾರಂಭಿಸಿರುವುದಾಗಿ ವರದಿಯಾಗಿದೆ.

ಆರೋಪಿ ಪ್ರವೇಶ್ ಶುಕ್ಲಾನ ಮನೆಯನ್ನು ಸ್ಥಳೀಯಾಡಳಿತವು ಧ್ವಂಸಗೊಳಿಸಿತ್ತು. ಸ್ಥಳೀಯಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಬ್ರಾಹ್ಮಣ ಸಮಾಜವು ದೇಣಿಗೆ ಸಂಗ್ರಹ ಅಭಿಯಾನವನ್ನು ಆರಂಭಿಸಿದೆ.

ಪ್ರವೇಶ್ ನ ತಂದೆ ರಮಾಕಾಂತ್ ಶುಕ್ಲಾ ಅವರ ಬ್ಯಾಂಕ್‌ ಖಾತೆ ಸಂಖ್ಯೆ ಬ್ರಾಹ್ಮಣ ಸಮುದಾಯದ ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದ್ದು, ರಾಜ್ಯಾದ್ಯಂತ ಇರುವ ಸಮುದಾಯದ ಸದಸ್ಯರು ಹಣ ಕಳುಹಿಸಲು ಪ್ರಾರಂಭಿಸಿದ್ದಾರೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

Join Whatsapp
Exit mobile version