ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರಲ್ಲಿ ಬ್ರಾಹ್ಮಣರೇ ಹೆಚ್ಚು ಎಂದ ಎಸ್.ಎ.ರಾಮದಾಸ್

Prasthutha|

ಮೈಸೂರು: ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಾಹ್ಮಣರೇ ಅತೀ ಹೆಚ್ಚು ಸಂಖ್ಯೆಯಲ್ಲಿ ಹೋರಾಡಿ  ಮಡಿದವರಾಗಿದ್ದಾರೆ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿಕೆ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

- Advertisement -

ಮೈಸೂರು ನಗರದ ಆದರ್ಶ ಸೇವಾ ಸಂಘ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಹಾಗೂ ವಿಪ್ರ ಪರಿಷತ್ ಜಂಟಿಯಾಗಿ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರಲ್ಲಿ ಬ್ರಾಹ್ಮಣರೇ ಅತೀ ಹೆಚ್ಚು ಎನ್ನುವುದಕ್ಕೆ ಸರ್ಕಾರಿ ದಾಖಲೆಗಳಿವೆ. ಯಾವುದೇ ಸಾಮಾಜಿಕ ಹೋರಾಟದಲ್ಲಿ ವಿಪ್ರರ ಪಾತ್ರವನ್ನು ಕಡೆಗಣಿಸುವಂತಿಲ್ಲ ಎಂದು ರಾಮ್ ದಾಸ್ ಹೇಳಿದರು.

ರಾಮದಾಸ್ ಅವರ ಈ ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿ ಕನ್ನಡಪರ ಹೋರಾಟಗಾರ ಎಸ್.ಸಿ.ದಿನೇಶ್ ಕುಮಾರ್ ಟೀಕಿಸಿದ್ದು,  ರಾಮದಾಸ್ ಈ ಹಿಂದೆ ಹಲವು ಸುಳ್ಳುಗಳನ್ನು ಹೇಳಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

Join Whatsapp