ಲಂಚ ಸ್ವೀಕಾರ ಪ್ರಕರಣ: ಮಾಡಾಳ್ ಪ್ರಶಾಂತ್’ಗೆ ಜಾಮೀನು

Prasthutha|

ಬೆಂಗಳೂರು: ಟೆಂಡರ್ ಗಾಗಿ ಲಂಚ ಪಡೆದ ಆರೋಪದಲ್ಲಿ ಬಂಧನವಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

- Advertisement -


ಮಾರ್ಚ್ 2 ರಂದು ನಡೆದ ಟ್ರ್ಯಾಪ್ ಕಾರ್ಯಚರಣೆ ವೇಳೆ 2 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಪೈಕಿ ಶ್ರೇಯಸ್ ಕಶ್ಯಪ್ ಕಂಪೆನಿಯಿಂದ 40 ಲಕ್ಷ ರೂ. ಲಂಚ ಪಡೆಯುವಾಗ ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದರು.


ಬೆಂಗಳೂರು ಜಲ ಮಂಡಳಿ ಮತ್ತು ಒಳಚರಂಡಿ ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್ ಅವರ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆ ಅವರು 40 ಲಕ್ಷ ರೂ.ಗೂ ಹೆಚ್ಚು ಮೊತ್ತದ ಲಂಚ ಪಡೆಯುತ್ತಿರುವುದು ಬಯಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು, ಇಂದು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

- Advertisement -


ಇದೇ ಪ್ರಕರಣದಲ್ಲಿ ಸಿಲುಕಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈಗಾಗಲೇ ಜಾಮೀನು ಮಂಜೂರು ಮಾಡಿದೆ.

Join Whatsapp