ಉತ್ತರ ಪ್ರದೇಶದಲ್ಲಿ ವಧು-ವರರಾದ ಕಪ್ಪೆಗಳು: ಹಿಂದೂ ಮಹಾಸಭಾ ಸಂಘಟನೆಯ ಪೌರೋಹಿತ್ಯ !

Prasthutha|

ಗೋರಖ್ ಪುರ: ಉತ್ತರ ಪ್ರದೇಶದಲ್ಲಿ ಈ ಬಾರಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆಗಾಗಿ ಪ್ರಾರ್ಥಿಸಿದ ಗೋರಖ್ ಪುರದ ಜನರು ಕಪ್ಪೆಗಳಿಗೆ ಮದುವೆ ಮಾಡುವ ಸಂಪ್ರದಾಯದ ಮೊರೆ ಹೋಗಿದ್ದಾರೆ.

- Advertisement -


ಗೋರಖ್ ಪುರದ ಕಾಳಿಬರಿ ದೇವಸ್ಥಾನದಲ್ಲಿ ಹಿಂದೂ ಮಹಾಸಭಾ ಸಂಘಟನೆಯು ಕಪ್ಪೆಗಳ ಮದುವೆಯ ಎಲ್ಲ ಕಾರ್ಯಗಳನ್ನು ನಿರ್ವಹಿಸಿದೆ.


ಬಳಿಕ ಮಾತನಾಡಿದ ಹಿಂದೂ ಮಹಾಸಭಾದ ರಮಾಕಾಂತ್ ವರ್ಮಾ, ಈ ಪ್ರದೇಶದಲ್ಲಿ ಬರಪೀಡಿತ ಸನ್ನಿವೇಶವಿದೆ. ಮಳೆಗಾಲವಾದರೂ, ಸಾಕಷ್ಟು ಮಳೆ ಸುರಿದಿಲ್ಲ. ಹೀಗಾಗಿ ಕಪ್ಪೆಗಳಿಗೆ ಮದುವೆ ಮಾಡಿಸಲಾಗಿದೆ ಎಂದು ಹೇಳಿದ್ದಾರೆ.

Join Whatsapp