ಮದುವೆ ಆರತಕ್ಷತೆ ವೇಳೆ ಕುಸಿದು ವಧು ಮೃತ್ಯು : ಅಂಗಾಂಗ ದಾನ ಮಾಡಿದ ಪೋಷಕರು

Prasthutha|

ಕೋಲಾರ: ಮದುವೆ ಆರತಕ್ಷತೆ ನಡೆಯುತ್ತಿದ್ದಾಗ ವಧು ದಿಢೀರ್ ಕುಸಿದು ಬಿದ್ದು, ಆಕೆಯ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ, ಆಕೆಯ ಪೋಷಕರು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

- Advertisement -

ವಧು ಚೈತ್ರ (26) ಹಠಾತ್​ ಆಗಿ ಆರತಕ್ಷತೆ ವೇಳೆಯೇ ಕುಸಿದು ಬಿದ್ದರು. ಕೂಡಲೇ ಅವರನ್ನು ನಿಮಾನ್ಸ್​ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಚೈತ್ರಾಳ ಬ್ರೈನ್​ ಡೆಡ್​ ಆಗಿದೆ. ಅವಳು ಬದುಕುಳಿಯುವುದು ಅಸಾಧ್ಯ ಎಂದು ವೈದ್ಯರು ಆಕೆಯ ಪೋಷಕರಿಗೆ ತಿಳಿಸಿದ್ದಾರೆ. ಈ ಸುದ್ದಿ ತಿಳಿದ ಪೋಷಕರ ರೋದನೆ ಮುಗಿಲು ಮುಟ್ಟಿತು. ಇಂತಹ ಹೃದಯವಿದ್ರಾವಕ ದುರಂತದ ನಡುವೆಯೂ ಆಕೆಯ ಪೋಷಕರು ತಮ್ಮ ಮಗಳ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದರು.

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್, ವೈದ್ಯರು ಮೆದುಳು ನಿಷ್ಕ್ರಿಯವಾಗಿದೆ ಎಂದು ಹೇಳಿ ದ್ದಾರೆ. ಇದರಿಂದ ಕಂಗಾಲಾದ ಪೋಷಕರು ಆಕೆಯ ಅಂಗಾಂಗ ದಾನ ಮಾಡಿ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Join Whatsapp