ದೆಹಲಿ ಮಾದರಿಯ ಗ್ಯಾರಂಟಿಗಳನ್ನು ಕರ್ನಾಟಕದಲ್ಲಿ ಈಡೇರಿಸಲು ಕಾಂಗ್ರೆಸ್ ಗೆ ಸಂಪೂರ್ಣ ಸಹಾಯ ಹಸ್ತ ನೀಡಲು ಆಪ್ ಸಿದ್ಧ : ಬ್ರಿಜೇಶ್ ಕಾಳಪ್ಪ

Prasthutha|

ಬೆಂಗಳೂರು : ” ಕಾಂಗ್ರೆಸ್ ಪಕ್ಷದ ಆಶ್ವಾಸನೆಗಳು ಮತ್ತು ಗ್ಯಾರಂಟಿಗಳು ಆಮ್ ಆದ್ಮಿ ಪಕ್ಷದ 90% ನಕಲು ಆಗಿದ್ದು , ಇವುಗಳನ್ನು ರಾಜ್ಯದ ಜನತೆಗೆ ಸಂಪೂರ್ಣವಾಗಿ ತಲುಪಿಸಲು ನಾವು ಸದಾ ಸಿದ್ಧರಿದ್ದೇವೆ. ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಈಗಾಗಲೇ ಈಡೇರಿಸಿರುವ ಈ ಎಲ್ಲಾ ಭರವಸೆಗಳನ್ನು ಅನಧಿಕೃತವಾಗಿ ಉನ್ನತ ಅಧಿಕಾರಿಗಳನ್ನು ಆ ರಾಜ್ಯಗಳಿಗೆ ಕಳಿಸುವುದನ್ನು ಬಿಟ್ಟು ಕಾಂಗ್ರೆಸ್ ಪಕ್ಷವು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ರವರಿಗೆ ಪತ್ರ ಬರೆದರೆ ನಾವುಗಳು ಸಂಪೂರ್ಣವಾಗಿ ನಿಮಗೆ ತಾಂತ್ರಿಕ ಸಹಾಯ ಹಸ್ತವನ್ನು ಮಾಡುತ್ತೇವೆ” ಎಂದು ಬ್ರಿಜೇಶ್ ಕಾಳಪ್ಪ ತಿಳಿಸಿದರು.

- Advertisement -

ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಸಂವಹನ ಮುಖ್ಯಸ್ಥ ಬ್ರಿಜೇಶ್ ಕಾಳಪ್ಪ, ” ಜನತೆಯಿಂದ ಸಂಪೂರ್ಣ ತಿರಸ್ಕರಿಸಲ್ಪಟ್ಟಿರುವ ಬಿಜೆಪಿ ಇಂದು ರಾಜ್ಯದ ಜನತೆಗೆ ಪ್ರಚೋದಿಸಿ ಗಲಾಟೆ ಮಾಡಿ ಎನ್ನುವ ಮೂಲಕ ಅಶಾಂತಿಯನ್ನು ಮೂಡಿಸಲು ಯತ್ನಿಸುತ್ತಿರುವುದು ಹೇಯಕರ ಕೃತ್ಯ ಆಗಿದ್ದು, ರೈತರ ಆದಾಯ ದ್ವಿಗುಣ, ಸರ್ವರಿಗೂ ವಸತಿ, ವಿದೇಶಗಳಲ್ಲಿನ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೂ 15ಲಕ್ಷ, ಪ್ರತಿವರ್ಷ ಎರಡು ಕೋಟಿ ಉದ್ಯೋಗ ನೀಡಿಕೆ, ಐದು ಟ್ರಿಲಿಯನ್ ಆರ್ಥಿಕತೆ ಬುಲೆಟ್ ಟ್ರೈನ್, ಪೆಟ್ರೋಲ್ ಡೀಸೆಲ್ ಬೆಲೆ ಇಳಿಸುವಲ್ಲಿ ವೈಫಲ್ಯ, ಬೆಲೆ ಏರಿಕೆಯಂತಹ ಯಾವುದೇ ಆಶ್ವಾಸನೆಗಳನ್ನು ಇದುವರೆಗೂ ಈಡೇರಿಸದೆ ನೈತಿಕತೆ ಇಲ್ಲದೆ ಬಿಜೆಪಿಯವರು ಏಕಾಏಕಿ ರಾಜ್ಯದ ಶಾಂತಿಗೆ ಭಂಗ ತರುವ ರೀತಿಯಲ್ಲಿ ಅಶಾಂತಿಯನ್ನು ಮೂಡಿಸಲು ಯತ್ನಿಸುತ್ತಿರುವುದು ಬ್ರಿಜೇಶ್ ಕಾಳಪ್ಪ ಖಂಡಿಸಿದರು.

ಈ ಎಲ್ಲಾ ಭರವಸೆಗಳನ್ನು ಈಡೇರಿಸಲು ಆಮ್ ಆದ್ಮಿ ಪಕ್ಷದ ಪ್ರಾಮಾಣಿಕ ಪಾರದರ್ಶಕ ಆಡಳಿತ ಶೈಲಿಯಿಂದ ಮಾತ್ರ ಸಾಧ್ಯ, ಇವುಗಳನ್ನು ರೂಡಿಸಿಕೊಳ್ಳಲು ಕಾಂಗ್ರೆಸ್ ಪಕ್ಷವು ಕಾರ್ಯೋನ್ಮುಖವಾಗಬೇಕೆಂದು ತಿಳಿಸಿದರು.

- Advertisement -

ಕಾಂಗ್ರೆಸ್ ಪಕ್ಷವು ಇನ್ನು ಒಂದು ತಿಂಗಳಲ್ಲಿ ತಾನು ನೀಡಿರುವ ಗ್ಯಾರಂಟಿಗಳನ್ನು ಈಡೇರಿಸದಿದ್ದಲ್ಲಿ ಆಮ್ ಆದ್ಮಿ ಪಕ್ಷವು ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರವನ್ನು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮಾಧ್ಯಮ ಉಸ್ತುವಾರಿ ಜಗದೀಶ್ ವಿ. ಸದಂ ಕಾರ್ಯಾಧ್ಯಕ್ಷ ಶಿವರಾಯಪ್ಪ ಜೋಗಿನ್ ಉಪಸ್ಥಿತರಿದ್ದರು.

Join Whatsapp