ಮಾನ್ಸೂನ್ ಆಫರ್; 100 ಶಾಸಕರನ್ನು ಕರೆತನ್ನಿ, ಸರ್ಕಾರ ರಚಿಸಿ: ಬಿಜೆಪಿ ಬಿರುಕಿನ ಬಗ್ಗೆ ಅಖಿಲೇಶ್ ಪೋಸ್ಟ್!

Prasthutha|

ಲಕ್ನೋ: ಉತ್ತರ ಪ್ರದೇಶ ಬಿಜೆಪಿಯಲ್ಲಿ ಬಿರುಕು ಮೂಡಿದೆ ಎಂಬ ಊಹಾಪೋಹಗಳ ನಡುವೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಗುರುವಾರ ತಮ್ಮ ಎಕ್ಸ್ನಲ್ಲಿ ಬರೆದು ಕೊಂಡಿರುವ ವಿಷಯ ಹಲವರ ನಿದ್ದೆಗೆಡುವಂತೆ ಮಾಡಿದೆ.

- Advertisement -


ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಆಡಳಿತ ಪಕ್ಷದ ಶಾಸಕರನ್ನು ಪಕ್ಷ ಬದಲಾಯಿಸುವಂತೆ ಹೇಳಲಾಗುತ್ತಿದೆ ಎನ್ನಲಾಗುತ್ತಿದೆ. ಹೀಗಾಗಿ ಮಾನ್ಸೂನ್ ಆಫರ್: ನೂರು ತನ್ನಿ, ಸರ್ಕಾರ ರಚಿಸಿ ಎಂದು ಅಖಿಲೇಶ್ ಪೋಸ್ಟ್ ಮಾಡಿದ್ದಾರೆ.

- Advertisement -

ಅಖಿಲೇಶ್ ಯಾದವ್ ಅವರು ತಮ್ಮ ಪೋಸ್ಟ್ ನಲ್ಲಿ ಯಾರನ್ನೂ ಹೆಸರಿಸದಿದ್ದರೂ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅತೃಪ್ತಗೊಂಡು ಬಿಜೆಪಿ ತೊರೆಯಲು ಸಿದ್ದರಾಗಿರುವವರಿಗೆ ಇದು ಸಂದೇಶವಾಗಿದೆ ಎಂದು ಎಸ್ ಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. 2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಗೆದ್ದಿದೆ. ನಮಗೆ 100 ಅತೃಪ್ತ ಬಿಜೆಪಿ ಶಾಸಕರ ಬೆಂಬಲ ಸಿಕ್ಕರೆ, ನಾವು ಸುಲಭವಾಗಿ ಸರ್ಕಾರ ರಚಿಸುತ್ತೇವೆ” ಎಂದು ಎಸ್ ಪಿ ನಾಯಕ ವಿವರಿಸಿದರು.



Join Whatsapp