Home ಟಾಪ್ ಸುದ್ದಿಗಳು ಕೆಂಗೇರಿ ಕೆರೆಗೆ ಬಿದ್ದು ಅಣ್ಣ-ತಂಗಿ ಮೃತ್ಯು​: 5 ಲಕ್ಷ ರೂ ಪರಿಹಾರ ಘೋಷಿಸಿದ ಡಿಕೆ ಶಿವಕುಮಾರ್

ಕೆಂಗೇರಿ ಕೆರೆಗೆ ಬಿದ್ದು ಅಣ್ಣ-ತಂಗಿ ಮೃತ್ಯು​: 5 ಲಕ್ಷ ರೂ ಪರಿಹಾರ ಘೋಷಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಕೆಂಗೇರಿ ಕೆರೆಗೆ ಬಿದ್ದು ಅಣ್ಣ-ತಂಗಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಬಿಬಿಎಂಪಿಯಿಂದ ಐದು ಲಕ್ಷ ರೂ. ಪರಿಹಾರವನ್ನು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಡಿಕೆ ಶಿವಕುಮಾರ್​, ಮಕ್ಕಳು ಇಬ್ಬರು ಸಣ್ಣವರು ಹಾಗಾಗಿ ಬಿಬಿಎಂಪಿಯಿಂದ ಇಬ್ಬರು ಮಕ್ಕಳಿಗೆ ಐದು ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಪರಿಹಾರ ನೀಡುವ ಸಂಬಂಧ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್​ ಜತೆ ಮಾತಾಡಿದ್ದೇನೆ. ಬೆಂಗಳೂರಿನ ಯಶವಂತಪುರ ಕ್ಷೇತ್ರ ವ್ಯಾಪ್ತಿಗೆ ಕೆಂಗೇರಿ ಸೇರುತ್ತದೆ ಎಂದಿದ್ದಾರೆ.

ನಾಗಮ್ಮ ಪುತ್ರಿ ಮಹಾಲಕ್ಷ್ಮೀ, ಪುತ್ರ ಜಾನ್ ಸೀನ ಮೃತಪಟ್ಟಿದ್ದರು. ನಿನ್ನೆ ಬೆಳಗ್ಗೆ ಆಕಸ್ಮಿಕವಾಗಿ ಕೆಂಗೇರಿ ಕೆರೆಗೆ ಬಿದ್ದಿದ್ದ ತಂಗಿ ಮಹಾಲಕ್ಷ್ಮೀ ರಕ್ಷಣೆಗಾಗಿ ಕೆರೆಗೆ ಇಳಿದಿದ್ದ ಅಣ್ಣ ಜಾನ್ ಸೀನ ಕೂಡ ಮೃತಪಟ್ಟಿದ್ದ. ನಿನ್ನೆ ಅಣ್ಣ ತಂಗಿಯ ಮೃತದೇಹಗಳು ಪತ್ತೆಯಾಗಿದ್ದವು.

Join Whatsapp
Exit mobile version