ಅಣ್ಣ-ತಂಗಿ ಬಚಾವ್ ಆಗಿ ಖರ್ಗೆ ಬಲಿಯಾಗುತ್ತಾರೆ: ಅಮಿತ್ ಶಾ

Prasthutha|

ಖುಷಿನಗರ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ ಸೋಲಿಗೆ ಖರ್ಗೆ ಅವರನ್ನು ದೂಷಿಸುತ್ತಾರೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಬಚಾವ್​ ಆಗುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ.

- Advertisement -

ಕುಶಿನಗರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಮೊದಲ ಐದು ಹಂತಗಳ ವಿವರ ನನ್ನ ಬಳಿ ಇದೆ. ಲೋಕಸಭೆ ಚುನಾವಣೆಯ ಐದು ಹಂತಗಳಲ್ಲಿ ಪ್ರಧಾನಿ ಮೋದಿ 310 ಸ್ಥಾನಗಳನ್ನು ದಾಟಿದ್ದಾರೆ. ಜೂನ್ 4 ರಂದು ರಾಹುಲ್ 40 ಮತ್ತು ಅಖಿಲೇಶ್ ಯಾದವ್ 4 ಸ್ಥಾನಗಳನ್ನು ಸಹ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಜೂನ್ 4 ರಂದು ಮಧ್ಯಾಹ್ನ ರಾಹುಲ್ ಬಾಬಾರವರು ಪತ್ರಿಕಾಗೋಷ್ಠಿ ನಡೆಸಿ ಇವಿಎಂಗಳಿಂದಾಗಿ ಸೋತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ. ನಷ್ಟದ ಹೊಣೆ ಖರ್ಗೆಯವರ ಮೇಲೂ ಬೀಳಲಿದೆ ಎಂದಿದ್ದಾರೆ.



Join Whatsapp