ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

Prasthutha|

ತುಮಕೂರು: ಬಿಜೆಪಿ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿ.ಕೆ.ಹಳ್ಳಿ ಕ್ರಾಸ್ನಲ್ಲಿ ನಡೆದಿದೆ.

- Advertisement -

ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಪಾವಗಡದಿಂದ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಪ್ರಸನ್ನಕುಮಾರ್ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಆದರೆ, ಕೊಲೆಗೆ ನಿಖರ ಕಾರಣ ತಿಳಿದಿಲ್ಲ.

ಪ್ರಸನ್ನಕುಮಾರ್ ವಿಧಾನಪರಿಷತ್ ಚುನಾವಣೆ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿದ್ದರು. ಜೊತೆಗೆ ತಾಲೂಕು ಬಿಜೆಪಿಯಲ್ಲಿ ರೈತ ಯುವಮೋರ್ಚ ಕಾರ್ಯಕಾರಿಣಿ ಸದಸ್ಯನಾಗಿದ್ದರು.

- Advertisement -

ವೈಯಕ್ತಿಕ ಕಾರಣದಿಂದ ಪ್ರಸನ್ನ ಕುಮಾರ್ ಅವರನ್ನು ಹತ್ಯೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Join Whatsapp