ಬಿಎಸ್’ಸಿ ವಿದ್ಯಾರ್ಥಿನಿ ನೇಣಿಗೆ ಶರಣು

Prasthutha|

ಬೆಂಗಳೂರು: ಖಾಸಗಿ ಕಾಲೇಜೊಂದರಲ್ಲಿ ಬಿಎಸ್’ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ  ನೇಣು ಬಿಗಿದು ಆತ್ಮಹತ್ಯೆಗೆ  ಶರಣಾಗಿರುವ ದಾರುಣ ಘಟನೆ ಸೋಲದೇವನಹಳ್ಳಿಯಲ್ಲಿ ನಡೆದಿದೆ.

- Advertisement -

ಆತ್ಮಹತ್ಯೆಗೆ ಶರಣಾಗಿರುವ ಯುವತಿಯನ್ನು ಪಶ್ಚಿಮ ಬಂಗಾಳ ಮೂಲದ ರಮಿತಾ ರಾಯ್ ಎಂದು ಗುರುತಿಸಲಾಗಿದೆ. ರಮಿತಾ ಸೋಲದೇವನಹಳ್ಳಿಯ ಮನೆಯೊಂದರಲ್ಲಿ ವಾಸವಿದ್ದಳು.

ಆಕೆ ವಾಸವಿದ್ದ ಮನೆಯಲ್ಲಿಯೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

ಯುವತಿ ಪಶ್ಚಿಮ ಬಂಗಾಳ ಮೂಲದವಳಾಗಿರುವುದರಿಂದ ಆಕೆಯ ಪೋಷಕರು ಇಂದು ಆಗಮಿಸುವ ಸಾಧ್ಯತೆಯಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Join Whatsapp